Breaking News :

ಶಾಲಾ ಆವರಣ ಸ್ವಚ್ಛಗೊಳಿಸಿ ರಸ್ತೆ ಗುಂಡಿ ಮುಚ್ಚಿದ ನೇತಾಜಿ ಯುವಕ ಸಂಘ : ಹಲವರಿಂದ ಪ್ರಶಂಸೆ 

ಶಾಲಾ ಆವರಣ ಸ್ವಚ್ಛಗೊಳಿಸಿ ರಸ್ತೆ ಗುಂಡಿ ಮುಚ್ಚಿದ ನೇತಾಜಿ ಯುವಕ ಸಂಘ : ಹಲವರಿಂದ ಪ್ರಶಂಸೆ ಸಿದ್ದಾಪುರ : ನೇತಾಜಿ ಯುವಕ ಸಂಘ ವತಿಯಿಂದ ಗುಹ್ಯ ಶಾಲೆಯ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. ಶ್ರಮದಾನದ ಮೂಲಕ ಶಾಲೆಯ ಆವರಣದಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ತೆರವುಗೊಳಿಸಿದ ಸಂಘದ ಸದಸ್ಯರು ಇದೇ ಸಂದರ್ಭ ಸಮೀಪದ ರಸ್ತೆಯಲ್ಲಿದ್ದ ಗುಂಡಿಗಳನ್ನು ಮಣ್ಣು ಹಾಕಿ ಮುಚ್ಚಿದ್ದಾರೆ. ಸಂಘದ ಕಾರ್ಯಕ್ಕೆ ಹಲವರು ಶ್ಲಾಘನೆ ವ್ಯಕ್ತಪಡಿಸಿದ್ದು, ಸಾಮಾಜಿಕ ಕಾರ್ಯ ಹೀಗೆ ಮುಂದುವರೆಯಲಿ ಎಂದು ಹಾರೈಸಿದ್ದಾರೆ.

ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಮಾಳೇಟಿರ ತೃಪ್ತಿ ಬೋಪಣ್ಣ ನೇಮಕ

ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಮಾಳೇಟಿರ ತೃಪ್ತಿ ಬೋಪಣ್ಣ ನೇಮಕ ವಿರಾಜಪೇಟೆ: ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ಮಾಳೇಟಿರ ತೃಪ್ತಿ ಬೋಪಣ್ಣ ರವರು ನೇಮಕಗೊಂಡಿರುತ್ತಾರೆ. ಇವರನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ಒಂದು ವರ್ಷದ ಅವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಲಾಗಿದೆ ಎಂದು ವಿಶ್ವವಿದ್ಯಾಲಯವು ಆದೇಶಿಸಿರುತ್ತದೆ. ತೃಪ್ತಿ ಬೋಪಣ್ಣ ರವರು 22 ವರ್ಷಗಳ ಬೋಧನಾ ಅನುಭವವನ್ನು ಹೊಂದಿದ್ದು , ಕಳೆದ […]

ಬೇಡಿಕೆ ಈಡೇರಿಕೆಗಾಗಿ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದ ಆಶ್ರಮ ಶಾಲೆ ಶಿಕ್ಷಕರುಗಳ ನಿಯೋಗ

ಬೇಡಿಕೆ ಈಡೇರಿಕೆಗಾಗಿ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದ ಆಶ್ರಮ ಶಾಲೆ ಶಿಕ್ಷಕರುಗಳ ನಿಯೋಗ ಬೆಂಗಳೂರು : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಶ್ರಮ ಶಾಲೆಯ ಶಿಕ್ಷಕರುಗಳ ನಿಯೋಗವು ಮಾನ್ಯ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ ನೇತೃತ್ವದಲ್ಲಿ ಮುಖ್ಯಮಂತ್ರಿ  ಸಿದ್ದರಾಮಯ್ಯ ರವರನ್ನು  ಅವರ ನಿವಾಸ ಕೃಷ್ಣ ದಲ್ಲಿ ಭೇಟಿಯಾದರು. ಮಾನ್ಯ ಮುಖ್ಯಮಂತ್ರಿಗಳಲ್ಲಿ ಅವರುಗಳ ಸಮಸ್ಯೆಗಳನ್ನು ಹಾಗೂ ಬೇಡಿಕೆಗಳನ್ನು ಹೇಳಿಕೊಂಡ ನಿಯೋಗದವರು, ಅವರ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ಮಾಡಿದರು. ಅವರ ಸಮಸ್ಯೆಗಳನ್ನು […]

ಪೆರಂಬಾಡಿ : ಮಹಿಳಾ ಕಾಲೇಜಿನ ನೂತನ ಗ್ರಂಥಾಲಯ ಲೋಕಾರ್ಪಣೆ

ಪೆರಂಬಾಡಿ : ಮಹಿಳಾ ಕಾಲೇಜಿನ ನೂತನ ಗ್ರಂಥಾಲಯ ಲೋಕಾರ್ಪಣೆ ವಿರಾಜಪೇಟೆ :  ಪೆರಂಬಾಡಿಯಲ್ಲಿರುವ ಎಸ್.ಇ.ಎ ಮಹಿಳಾ ಕಾಲೇಜಿನ ನೂತನ ಗ್ರಂಥಾಲಯವನ್ನು ಇಂದು ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ.ಪೊನ್ನಣ್ಣ  ರವರು ಲೋಕಾರ್ಪಣೆ ಮಾಡಿದರು. ಬಳಿಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಮಾನ್ಯ ಶಾಸಕರು, ಮನುಷ್ಯನ ಜೀವನದಲ್ಲಿ ವಿದ್ಯಾಭ್ಯಾಸ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಶಾಲಾ ಕಾಲೇಜುಗಳಲ್ಲಿ ಸಿಗುವ ಜ್ಞಾನದೊಂದಿಗೆ ಇಂತಹ ಗ್ರಂಥಾಲಯಗಳಲ್ಲಿ ಲಭ್ಯವಿರುವ ಪ್ರಪಂಚದ ಎಲ್ಲಾ ಇತಿಹಾಸ ಹಾಗೂ ಪ್ರಸಕ್ತ ವಿದ್ಯಮಾನಗಳ ಪುಸ್ತಕಗಳನ್ನು ಓದುವ ಅಭಿರುಚಿಯನ್ನು ವಿದ್ಯಾರ್ಥಿಗಳು […]

ಕೊಡಗು ಪತ್ರಕತ೯ರ ಸಂಘದಿಂದ ಫೋಟೋ, ವಿಡಿಯೋ, ರೀಲ್ಸ್ ಸ್ಪಧೆ

ಕೊಡಗು ಪತ್ರಕತ೯ರ ಸಂಘದಿಂದ ಫೋಟೋ, ವಿಡಿಯೋ, ರೀಲ್ಸ್ ಸ್ಪಧೆ ಮಡಿಕೇರಿ : ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಕೊಡಗು ಪತ್ರಕತ೯ರ ಸಂಘ (ರಿ) ದ ವತಿಯಿಂದ ಪತ್ರಕತ೯ರು, ಸಾವ೯ಜನಿಕರಿಗೆ ಫೋಟೋ, ವಿಡಿಯೋ, ರೀಲ್ಸ್ ಸ್ಪಧೆ೯ ಆಯೋಜಿಸಲಾಗಿದೆ ಎಂದು ಸಂಘದ ಪ್ರಧಾನ ಕಾಯ೯ದಶಿ೯ ಸುರೇಶ್ ಬಿಳಿಗೇರಿ ತಿಳಿಸಿದ್ದಾರೆ. ಕೊಡಗು ಪತ್ರಕತ೯ರ ಸಂಘದ ಗೌರವ ಸಲಹೆಗಾರರಾದ ಬಿ.ಜಿ.ಅನಂತ ಶಯನ ಅವರು ತಮ್ಮ ಪುತ್ರಿ ಡಾ. ಅನುಶ್ರೀ ಅವರ ಹ್ಯಾಪಿ ಟೀತ್ ಕ್ಲಿನಿಕ್ ಹೆಸರಲ್ಲಿ ಸ್ಥಾಪಿಸಿರುವ ಮಾನವೀಯ ಮೌಲ್ಯಗಳ ಕುರಿತಾದ ಅತ್ಯುತ್ತಮ […]

ವಸತಿ ನಿಲಯಕ್ಕೆ ಮಹಿಳಾ ಕ್ಷೇಮಪಾಲಕರ ಹುದ್ದೆಗೆ ಅರ್ಜಿ ಆಹ್ವಾನ

ವಸತಿ ನಿಲಯಕ್ಕೆ ಮಹಿಳಾ ಕ್ಷೇಮಪಾಲಕರ ಹುದ್ದೆಗೆ ಅರ್ಜಿ ಆಹ್ವಾನ ಮಡಿಕೇರಿ : ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿರುವ ಕಿರಿಯರ ಕ್ರೀಡಾ ವಸತಿ ನಿಲಯಕ್ಕೆ ಮಹಿಳಾ ಕ್ಷೇಮಪಾಲಕರ (ಕೇರ್‍ಟೇಕರ್) ಹುದ್ದೆಗೆ (ಹೊರಗುತ್ತಿಗೆ ಆಧಾರದ ಮೇಲೆ) ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಗಲು ಮತ್ತು ರಾತ್ರಿಯ ವೇಳೆಯಲ್ಲಿ ಕ್ಷೇಮಪಾಲಕರು ಕಿರಿಯರ ಕ್ರೀಡಾ ನಿಲಯದಲ್ಲಿಯೇ ಇರಬೇಕು. ಮಹಿಳಾ ಅಭ್ಯರ್ಥಿಯಾಗಿರಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ. 08272-220986 ಅಥವಾ 9480032712 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ […]

ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರಿರುವ ಶಾಲೆಗೆ ಪ್ರೋತ್ಸಾಹಧನ

ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರಿರುವ ಶಾಲೆಗೆ ಪ್ರೋತ್ಸಾಹಧನ ಮಡಿಕೇರಿ : ರಾಜ್ಯ ಯುವನೀತಿ-2012 ಅನುಷ್ಠಾನ ಅಡಿಯಲ್ಲಿ ನಮ್ಮೂರ ಶಾಲೆಗೆ ನಮ್ಮ ಯುವಜನರು ಯೋಜನೆಯನ್ನು 2017-18ನೇ ಸಾಲಿನಿಂದ ಅನ್ವಯವಾಗುವಂತೆ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲ್ಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರಿರುವ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ಆಯ್ಕೆಯಾದ ಪ್ರತಿ ಶಾಲೆಗೆ ಪ್ರೋತ್ಸಾಹವಾಗಿ ತಲಾ ರೂ.1 […]

ಜಿಲ್ಲೆಯ ಜನತೆಗೂ ತಟ್ಟಿದ ಸಾರಿಗೆ ನೌಕರರ ಮುಷ್ಕರ ಬಿಸಿ

  ಜಿಲ್ಲೆಯ ಜನತೆಗೂ ತಟ್ಟಿದ ಸಾರಿಗೆ ನೌಕರರ ಮುಷ್ಕರ ಬಿಸಿ ಮಡಿಕೇರಿ : ಇಂದು ಬೆಳಗ್ಗೆಯಿಂದ ರಾಜ್ಯದಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆ ಮುಷ್ಕರದ ಬಿಸಿ ಕೊಡಗಿನ ಜನತೆಗೂ ತಟ್ಟಿದೆ. ಮುಷ್ಕರ ಹಿನ್ನೆಲೆ ಜಿಲ್ಲೆಯಲೂ KSRTC ಬಸ್ಸುಗಳು ರಸ್ತೆಗಿಳಿಯದೆ ನಿಲ್ದಾಣಗಳಲ್ಲೇ ನಿಂತಿದ್ದವು. ಹತ್ತು ಗಂಟೆಯಾದರು ಶಾಲೆಗೆ ಹೋಗಲಾರದೆ ವಿದ್ಯಾರ್ಥಿಗಳು ಪರದಾಡಿದರು. ಸಾರಿಗೆ ಬಸ್ ಗಳಿಲ್ಲದೆ ಪರದಾಡಿದ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಖಾಸಗಿ ಸೇವೆಗಳತ್ತ ಮುಖ ಮಾಡಿದ ಪ್ರಸಂಗ ಕಂಡುಬಂತು. ಸರಕಾರಿ ಬಸ್ ನೌಕರರು ಮುಷ್ಕರ ಕೈಗೊಂಡು, […]

ದಿಯಾ ಭೀಮಯ್ಯ ಗೆ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪ್ರಶಸ್ತಿ

ದಿಯಾ ಭೀಮಯ್ಯ ಗೆ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪ್ರಶಸ್ತಿ ಮಡಿಕೇರಿ : ಕರ್ನಾಟಕ ಬ್ಯಾಡ್ಮಿಂಟನ್ ಸಂಸ್ಥೆ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಸಲಾದ ಯೋನೆಕ್ಸ್ ಸನ್ ರೈಸ್ ಕರ್ನಾಟಕ ರಾಜ್ಯ ಜೂನಿಯರ್ ಮತ್ತು ಸೀನಿಯರ್ ಬ್ಯಾಡ್ಮಿಂಟನ್ ಸ್ಪರ್ಧೆಯು ಜುಲೈ 27 ರಿಂದ ಆಗಸ್ಟ್ 2 ರವರೆಗೆ ನಡೆಯಿತು. ಪಂದ್ಯಾವಳಿಯಲ್ಲಿ 357 ಕರ್ನಾಟಕದ ಅತ್ಯುತ್ತಮ ಶ್ರೇಯಾಂಕಿತ ಆಟಗಾರರು ಪ್ರಶಸ್ತಿಗಾಗಿ ಸೆಣಸಾಡಿದರು. ಇದರಲ್ಲಿ ದಿಯಾ ಭೀಮಯ್ಯ ಮೂರು ವಿಭಾಗದಲ್ಲಿ ಅಂತಿಮ ಘಟ್ಟಕ್ಕೆ ತಲುಪಿದ್ದು, ಪ್ರಸಂಶನೀಯ ಕೊಡಗಿನ ಬೊಪ್ಪಂಡ […]

ಮಾಜಿ SAI ಹಾಕಿ ತರಬೇತುದಾರ ಚೇಂದಂಡ ಅಶ್ವತ್ ನಿಧನ

ಮಾಜಿ SAI ಹಾಕಿ ತರಬೇತುದಾರ ಚೇಂದಂಡ ಅಶ್ವತ್ ನಿಧನ ಮಡಿಕೇರಿ : ಮಾಜಿ SAI ಹಾಕಿ ತರಬೇತುದಾರ ಚೇಂದಂಡ ಅಶ್ವತ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅಪಾರ ಕ್ರೀಡಾ ಪ್ರೇಮಿಗಳನ್ನು ಹಾಗೂ ಸ್ನೇಹಿತರ ಬಳಗವನ್ನು ಅಗಲಿದ್ದಾರೆ. ಗ್ವಾಲಿಯರ್ ನಲ್ಲಿ B.P.Ed ಹಾಗೂ M.P.Ed ಪಡೆದು NIS ಪದವಿ ಪಡೆದಿರುವ ಇವರು ಬೆಂಗಳೂರಿನ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದ ತರಬೇತುದಾರ, ದಶಕಗಳಿಂದ ಬೆಂಗಳೂರಿನ SAI ತರಬೇತಿದಾರನಾಗಿ ಸೇವೆಸಲ್ಲಿಸಿದ್ದಾರೆ. ಕೊಡಗು ಹಾಗೂ ಕರ್ನಾಟಕದಿಂದ ಹಲವು ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಆಟಗಾರರನ್ನು ತಯಾರು […]