Breaking News :

ಏ.೨ರಿಂದ ಮುಕ್ಕಾಟಿರ ಕಪ್ ಕ್ರಿಕೆಟ್ ಉತ್ಸವ 

  ಜನವಾಹಿನಿ News ಮಡಿಕೇರಿ : ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ ಕೊಡವ ಕುಟುಂಬಗಳ ನಡುವಿನ ೨೪ನೇ ವರ್ಷದ ಕೌಟುಂಬಿಕ ಕ್ರಿಕೆಟ್ ಉತ್ಸವಕ್ಕೆ ಬೇತ್ರಿ ಮುಕ್ಕಾಟಿರ ಕುಟುಂಬಸ್ಥರು ಸಿದ್ಧತೆಗೆ ಮುಂದಾಗಿದ್ದು, .ಏ೨ರಿಂದ ಪಂದ್ಯಾಟ ಆರಂಭವಾಗಲಿದೆ ಎಂದು ಮುಕ್ಕಾಟಿರ ಕಪ್ ಕ್ರಿಕೆಟ್ ಉತ್ಸವ ಸಮಿತಿ ಅಧ್ಯಕ್ಷ ಎಂ.ಸುರೇಶ್ ತಿಳಿಸಿದ್ದಾರೆ. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೨೦೨೬ರ ಕ್ರಿಕೆಟ್ ಉತ್ಸವದ ಜವಾಬ್ದಾರಿಯನ್ನು ಬೇತ್ರಿ ಮುಕ್ಕಾಟಿರ ಕುಟುಂಬಸ್ಥರು ಹೊತ್ತಿದ್ದು, ಏ.೨ರಿಂದ ೨೮ ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಉತ್ಸವ ಸಮಿತಿಯನ್ನು ರಚಿಸಿದ್ದು, […]

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಅನುಗ್ರಹ ಕಾಲೇಜು ವಿದ್ಯಾರ್ಥಿ

  ಜನವಾಹಿನಿ News ಕುಶಾಲನಗರ : ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಕುಶಾಲನಗರ ಅನುಗ್ರಹ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಹೆಚ್ ಎಸ್ ಜೀವನ್ ಜಿಮ್ನಾಸ್ಟಿಕ್ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು ಕಾಲೇಜಿಗೆ ಕೀರ್ತಿ ತಂದಿದ್ದಾನೆ. ಇವನಿಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು ಪ್ರಾಂಶುಪಾಲರು ದೈಹಿಕ ಶಿಕ್ಷಣ ನಿರ್ದೇಶಕರು, ಉಪನ್ಯಾಸಕ ವೃಂದದವರು ಆಡಳಿತ ವರ್ಗದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ ಹಾಗೂ ರಾಷ್ಟ್ರಮಟ್ಟದಲ್ಲಿಯೂ ಇದೇ ರೀತಿಯಾದ ಸಾಧನೆಯನ್ನು ಮಾಡಿ ತಂದೆ ತಾಯಿಗಳಿಗೆ ಹಾಗೂ […]

ಏ.2 ರಿಂದ ಕೊಡವ ಕೌಟುಂಬಿಕ ಕಬಡ್ಡಿ ನಮ್ಮೆ

  ಜನವಾಹಿನಿ News ಮಡಿಕೇರಿ : ಮುಲ್ಲೇಂಗಡ ಒಕ್ಕದ ಆಶ್ರಯದಲ್ಲಿ ಪ್ರಪ್ರಥಮ ಬಾರಿಗೆ ಕೊಡವ ಕೌಟುಂಬಿಕ ಕಬಡ್ಡಿ ನಮ್ಮೆಯನ್ನು ೨೦೨೬ರ ಏ.೨,೩,೪ ರಂದು ಕಂಡಂಗಾಲ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕ್ರೀಡಾಕೂಟದ ಸಂಚಾಲಕ ಮುಲ್ಲೇಂಗಡ ಮದೋಷ್ ಪೂವಯ್ಯ ತಿಳಿಸಿದರು. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆ ತಾಲೂಕು ಕಂಡಂಗಾಲ ಗ್ರಾಮದಲ್ಲಿ ಮುಲ್ಲೇಂಗಡ ಒಕ್ಕ ಐನ್ ಮನೆ ಹೊಂದಿದೆ. ಕೊಡವ ಸಮುದಾಯಬಾಂಧವರಿಗೆ ಹಾಕಿ, ಕ್ರಿಕೆಟ್, ಹಗ್ಗಜಗ್ಗಾಟ ಇತ್ಯಾದಿ ಕ್ರೀಡಾಕೂಟವನ್ನು ಆಯೋಜಿಸಲಾಗುತ್ತಿದೆ. ಗ್ರಾಮೀಣ ಕ್ರೀಡೆಯಾದ ಕಬಡ್ಡಿಯನ್ನು ಉತ್ತೇಜಿಸು ನಿಟ್ಟಿನಲ್ಲಿ […]

ಕಾಫಿ ತೋಟಗಳ ನಡುವೆ ಶರ ವೇಗದಲ್ಲಿ ಪೈಪೋಟಿ ನೀಡಿದ ರ್‍ಯಾಲಿ ಪಟುಗಳು – ಕಾರುಗಳ  ಪೈಪೋಟಿಗೆ ಪ್ರೇಕ್ಷಕರು ಫುಲ್ ಫಿದಾ 

ಚಾಲನೆ ಸಂದರ್ಭ ಪಲ್ಟಿಯಾದ ಎರಡು ಕಾರು – 2ನೇ ದಿನ ತಾಂತ್ರಿಕ ದೋಷದಿಂದ ಹೊರಗುಳಿದ 10ಕ್ಕೆೊ ಹೆಚ್ಚು ಕಾರುಗಳು ಜನವಾಹಿನಿ News ಮಡಿಕೇರಿ :  ಬ್ಲೂ ಬ್ಯಾಂಡ್  ಎಫ್ಎಂ ಎಸ್‌ಸಿಐ ಇಂಡಿಯನ್ ನ್ಯಾಷನಲ್ ರ್‍ಯಾಲಿ ಚಾಂಪಿಯನ್ಶಿಪ್ ನೇತೃತ್ವದಲ್ಲಿ  ರೋಬಸ್ಟಾ ಸ್ಪೋರ್ಟ್ಸ್ ಅಂಡ್ ಅಡ್ವೆಂಚರ್ ಅಕಾಡೆಮಿ ಸಾಹಕಾರದೊಂದಿಗೆ ರೋಬಸ್ಟಾ 2025 ರ್‍ಯಾಲಿಯು ಪಾಲಿಬೆಟ್ಟ ಸುತ್ತಮುತ್ತಲ ಕಾಫಿ ತೋಟಗಳಲ್ಲಿ ಕಡಿದಾದ ರಸ್ತೆಯಲ್ಲಿ  ಸಂಚರಿಸಿ  ಗುರಿ ಮುಟ್ಟಲು ಅರಸಹಾಸ ಪಟ್ಟಲು.  ನಿಗದಿತ ಸಮಯ ಮುಟ್ಟಲು ತಾ ಮುಂದು ನಾ ಮುಂದು ಎಂಬಂತೆ   ಕಾರುಗಳು ಸರವೇಗದಲ್ಲಿ […]

ಇಯರ್ ಎಂಡ್ ಕ್ರಿಕೆಟ್ ಕಪ್ : ಪ್ರತಿಭೆಗಳನ್ನು ಗುರುತಿಸಲು, ಉತ್ತಮ ಬಾಂಧವ್ಯ ಬೆಳೆಯಲು ಕ್ರೀಡೆ ಸಹಕಾರಿ : ವಕೀಲ ಪ್ರಶಾಂತ್

  ಜನವಾಹಿನಿ News ಮಡಿಕೇರಿ : ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಉತ್ತಮ ಬಾಂಧವ್ಯ ಬೆಳೆಯುತ್ತೆ, ಜತೆಗೆ ಪರಸ್ಪರ ಒಬ್ಬರನ್ನೊಬ್ಬರು ಅರಿತುಕೊಳ್ಳಲು ಸಹಕಾರಿ ಆಗುದರ ಜತೆಗೆ ಪ್ರತಿಭೆಗಳನ್ನು ಗುರುತಿಸಲು ಕೂಡ ಅನುಕೂಲವಾಗುತ್ತೆ ಎಂದು ಅಮ್ಮತ್ತಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ವಕೀಲ ಪ್ರಶಾಂತ್ ಅಭಿಪ್ರಾಯಪಟ್ಟರು. ಟೀಂ ರೆಟ್ರೋ ವತಿಯಿಂದ ಇಂಜಿಲಗೆರೆ ಸರಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ, ಇಯರ್ ಎಂಡ್ ಕ್ರಿಕೆಟ್ ಕಪ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಿಬ್ಬನ್ ಕಟ್ ಮಾಡಿದ ಬಳಿಕ ಬ್ಯಾಟಿಂಗ್ ಮಾಡುವ […]

ಕ್ರೀಡೆಗೆ ಸರಕಾರ ಕೋಟ್ಯಾಂತರ ಅನುದಾನ ನೀಡಿದೆ ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು : ಶಾಸಕ ಪೊನ್ನಣ್ಣ

ಜನವಾಹಿನಿ News ಮಡಿಕೇರಿ : ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಆಯೋಜನೆಗೊಂಡ, ಕೊಡವ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯ ಮುಖ್ಯ ಅತಿಥಿಯಾಗಿ ಶಾಸಕರು ಹಾಗೂ ಮುಖ್ಯಮಂತ್ರಿ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ನವರು ಭಾಗವಹಿಸಿದ್ದರು. ಕ್ರಿಕೆಟ್ ಆಟಗಾರರಿಗೆ ಶುಭ ಕೋರುತ್ತಾ ಮಾತನಾಡಿದ ಮಾನ್ಯ ಶಾಸಕರು, ಜಗತ್ತಿನಾದ್ಯಂತ ಖ್ಯಾತಿ ಪಡೆದಿರುವ ಕ್ರಿಕೆಟ್ ಪಂದ್ಯಾಟವು, ಇಂದು ದೇಶದ ಎಲ್ಲಾ ಕ್ರೀಡಾ ಪ್ರೇಮಿಗಳು ಇಷ್ಟಪಡುವ ಕ್ರೀಡೆಯಾಗಿದೆ. ನಮ್ಮ ಕೊಡಗಿನಲ್ಲಿ ಸಹ, ಇಂತಹ ಪಂದ್ಯಾವಳಿಗಳು ನಡೆಯುವುದರಿಂದ ಅನೇಕ ಕ್ರಿಕೆಟ್ ಪಟುಗಳ ಪ್ರತಿಭೆ ಅನಾವರಣಕ್ಕೆ ಸಾಕ್ಷಿಯಾಗಿದೆ […]

ಅರ್ವತ್ತೋಕ್ಕು ಎ.ಕೆ.ಸಿ ವತಿಯಿಂದ ಕೈಲ್ ಪೋಳ್ದ್ ಕ್ರೀಡಾ ಕೂಟ

  ಜನವಾಹಿನಿ News ಮಡಿಕೇರಿ : ಮಡಿಕೇರಿ ತಾಲೂಕಿನ ಅರ್ವತ್ತೋಕ್ಲು ಗ್ರಾಮದ ಎ.ಕೆ.ಸಿ ಸಂಸ್ಥೆಯ ವತಿಯಿಂದ ಕೈಲ್ ಪೋಳ್ದ್ ವಾರ್ಷಿಕ ಕ್ರೀಡಾ ಕೂಟ ಜಬ್ಬಂಡ ವಾಡೆ ಮಂದ್ ನಲ್ಲಿ ಜರುಗಿತು. ಬೆಳಿಗ್ಗೆ ಸಾಂಪ್ರದಾಯಿಕ ಮಂದ್ ಮರಿಯುವ ಕಾರ್ಯಕ್ರಮದೊಂದಿಗೆ ಕ್ರೀಡಾ ಕೂಟಕ್ಕೆ ಚಾಲನೆ ನೀಡಲಾಯಿತು. ಸುಮಾರು 40 ಕ್ಕೂ ಹೆಚ್ಚು ವಿಭಾಗಗಳಲ್ಲಿ ಸ್ಪರ್ಧೆ ಇದ್ದು ಹಿರಿಯರು ಕಿರಿಯರು ಮಹಿಳೆಯರು ಸ್ಪರ್ಧಿಗಳಾಗಿ ಭಾಗವಹಿಸಿ ಸಂಭ್ರಮಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೋಳುಮಾಡಂಡ ರಘು ಪೂವಪ್ಪ ನವರು ಪಾರಂಪರಿಕ […]

ಮೂರ್ನಾಡು : ಕೈಲ್ ಮುಹೂರ್ತ ಹಬ್ಬದ ಆಟೋಟ

  ಜನವಾಹಿನಿ NEWS ಮೂರ್ನಾಡು : ಇಲ್ಲಿನ ನಂ.೪೩೯ನೇ ಸಹಕಾರ ಸ್ಪೋರ್ಟ್ಸ್ ಕ್ಲಬ್‌ನ ವತಿಯಿಂದ ೧೦೧ನೇ ವಾರ್ಷಿಕ ಕೈಲ್ ಮುಹೂರ್ತ ಹಬ್ಬದ ಆಟೋಟಗಳ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನಡೆಯಿತು.  ಮೂರ್ನಾಡು ವಿದ್ಯಾಸಂಸ್ಥೆಯ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಕ್ಲಬ್‌ನ ವತಿಯಿಂದ ಆಯೋಜಿಸಲಾಗಿದ್ದ ಆಟೋಟಗಳ ಕಾರ್ಯಕ್ರಮಗಳನ್ನು ತೆಂಗಿನಕಾಯಿಗೆ ಗುಂಡು ಹೊಡೆಯುವುದರ ಮೂಲಕ ಮೂರ್ನಾಡು ಪೊಲೀಸ್ ಉಪಠಾಣೆಯ ಪೊಲೀಸ್ ಅಧಿಕಾರಿ ಪಟ್ರಪಂಡ ಮೊಣ್ಣಪ್ಪ ಉದ್ಘಾಟಿಸಿ ಚಾಲನೆ ನೀಡಿದರು. ನಂತರ ಸಮಾರಂಭವನ್ನುದ್ದೇಶಿಸಿ ಮಾತನಾಡಿ ಕೊಡಗಿನ ಯುವಜನತೆ ಎಲ್ಲರೂ ಕ್ರೀಡಾಪುಟುಗಳಾಗಬೇಕು. ಮೂರ್ನಾಡು ಪಕ್ಕದಲ್ಲಿಯೆ ಅಂತರಾಷ್ಟ್ರೀಯ […]

ಕರ್ನಾಟಕ ಕ್ರೀಡಾ ಪ್ರಾಧಿಕಾರದ ನೂತನ ಉಪಾಧ್ಯಕ್ಷರಾಗಿ ಅರುಣ್ ಮಾಚಯ್ಯ ಪದಗೃಹಣ 

  ಜನವಾಹಿನಿ NEWS ಬೆಂಗಳೂರು : ಕರ್ನಾಟಕ ಕ್ರೀಡಾ ಪ್ರಾಧಿಕಾರದ ನೂತನ ಉಪಾಧ್ಯಕ್ಷರಾಗಿ ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿರುವ ಅಧಿಕೃತ ಕಚೇರಿಯಲ್ಲಿ, ಸನ್ಮಾನ್ಯ  ಚೆಪ್ಪುಡೀರ ಅರುಣ್ ಮಾಚಯ್ಯರವರು ಪದಗ್ರಹಣಗೈದರು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್ ಭೋಸ ರಾಜು , ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಶ್ರೀಮತಿ ಕಾಂಚನ್ ಪೊನ್ನಣ್ಣ  ಹಾಗೂ ಜಿಲ್ಲೆಯಿಂದ ಪದಗ್ರಹಣ ಸಮಾರಂಭಕ್ಕೆ ಸಾಕ್ಷಿಕರಿಸಲು ತೆರಳಿದ ಕಾಂಗ್ರೆಸ್ ಮುಖಂಡರುಗಳು, ಕ್ರೀಡಾ ಇಲಾಖೆಯ ಅಧಿಕಾರಿ ವರ್ಗದವರು […]

ಪ್ರಪಂಚಕ್ಕೆ ಸತ್ಯ ಹಾಗೂ ಅಹಿಂಸಾ ಮಾರ್ಗ ಪ್ರತಿಪಾದಿಸಿದ ಮಹಾನ್ ಚೇತನ ಮಹಾತ್ಮ ಗಾಂಧೀಜಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅಭಿಮತ

    ಜನವಾಹಿನಿ NEWS ಮಡಿಕೇರಿ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಸತ್ಯ ಹಾಗೂ ಅಹಿಂಸೆಯ ಮೂಲಕ ಇಡೀ ವಿಶ್ವಕ್ಕೆ ಬೆಳಕು ತೊರಿಸಿದ ಮಾಹಾನ್ ಚೇತನ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಪ್ರತಿಪಾದಿಸಿದ್ದಾರೆ. ಸತ್ಯ ಹಾಗೂ ಅಹಿಂಸೆ ಎಂಬ ಅಸ್ತ್ರಗಳಿಂದ ಬ್ರಿಟೀಷರ ವಿರುದ್ದ ಹೋರಾಡಿದ ಮಹಾತ್ಮ ಗಾಂಧೀಜಿ, ಈ ಎರಡೂ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದರು. ಇವರ ಹಾದಿಯಲ್ಲೇ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಯವರು ನಡೆದರು. ನೈತಿಕತೆಗೆ ಗಾಂಧೀಜಿ ಹಾಗೂ ಶಾಸ್ತ್ರೀಜಿಯವರು ಮಾದರಿಯಾಗಿದ್ದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ […]