Breaking News :

ವಿವಾದಿತ ಈದ್ಗಾ ಮೈದಾನದಲ್ಲಿ ಯಾವುದೇ ಸಂಘಟನೆಗಳಿಗೆ ಧ್ವಜಾರೋಹಣಕ್ಕೆ ಅವಕಾಶವಿಲ್ಲ; ಜಿಲ್ಲಾಡಳಿತ ಸ್ಪಷ್ಟನೆ

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ವಿವಾದಿತ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ದ್ವಜಾರೋಹಣಕ್ಕೆ ಸಿದ್ದತೆ ನಡೆಯುತ್ತಿದೆ, ಆದರೆ ಯಾವುದೇ ಸಂಘಟನೆಗಳಿಗೆ ಧ್ವಜಾರೋಹಣಕ್ಕೆ ಅವಕಾಶ ಇಲ್ಲ  ಎಂದು ಜಿಲ್ಲಾಡಳಿತ ತಿಳಿಸಿದೆ.

ನಾಳೆ ಬೆಳಗ್ಗೆ 8 ಘಂಟೆಗೆ ನಡೆಯುವ ಧ್ವಜಾರೋಹಣಕ್ಕೆ ಜಿಲ್ಲಾಡಳಿತ ವತಿಯಿಂದ ಬೆಂ.ಉತ್ತರ ವಲಯ ಉಪವಿಭಾಗಾಧಿಕಾರಿ ಪ್ರಮೋದ್ ಪಾಟೀಲ್ ಧ್ವಜಾರೋಹಣ ನಡೆಸಲಿದ್ದಾರೆ.

ಈ ಬಗ್ಗೆ ಮಾತನಾಡಿದ ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ ಕೆ.ಎ ಯಾವುದೇ ಸಂಘಟನೆಗಳಿಗೆ ಧ್ವಜಾರೋಹಣಕ್ಕೆ ಅವಕಾಶವಿಲ್ಲ. ಕೇವಲ ಸರ್ಕಾರ ನಿಗಧಿ ಪಡಿಸಿದ ಕಾರ್ಯಕ್ರಮದಲ್ಲಿ ಭಾಗಿಯಾಗಬಹುದು. ಧ್ವಜಾರೋಹಣಕ್ಕೆ ಸಂಘಟನೆಯವರು ಮುಂದಾದ್ರೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

Share this article

ಟಾಪ್ ನ್ಯೂಸ್

More News