ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಶುಕ್ರವಾರ ಮುಸ್ಲಿಮರ ಗುಂಪು ಸಿಟಿ ಚೌಕ್ ಪೊಲೀಸ್ ಠಾಣೆಯ ಹೊರಗೆ ಜಮಾಯಿಸಿ, ಪ್ರವಾದಿ ಮೊಹಮ್ಮದರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ರಾಮಗಿರಿ ಮಹಾರಾಜ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದು, ಬಳಿಕ ಪರಿಸ್ಥಿತಿ ಉದ್ವಿಗ್ನವಾಗಿದೆ.
ಪೊಲೀಸರು ಗುಂಪನ್ನು ಸಮಾಧಾನ ಪಡಿಸಲು ಯತ್ನಿಸಿದರು. ಶಾಂತಿ ಕಾಪಾಡುವಂತೆ ನಗರ ಚೌಕ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ನಿರ್ಮಲಾ ಪರದೇಶಿ ಮನವಿ ಮಾಡಿದರು. ಅವರ ಬೇಡಿಕೆಯಂತೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಪೊಲೀಸರು ರಾಮಗಿರಿ ಮಹಾರಾಜನ ವಿರುದ್ಧ ನಾಸಿಕ್ನ ಯೋಲಾ ಮತ್ತು ಛತ್ರಪತಿ ಸಂಭಾಜಿನಗರ ಜಿಲ್ಲೆಯ ವೈಜಾಪುರದಲ್ಲಿ ಪ್ರಕರಣಗಳನ್ನು ದಾಖಲಿಸಿದ್ದಾರೆ. ಸ್ಥಳೀಯ ನಿವಾಸಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಸೆಕ್ಷನ್ 302ರಡಿಯಲ್ಲಿ ವೈಜಾಪುರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ರಾಮಗಿರಿ ಮಹಾರಾಜರ ಹೇಳಿಕೆಗಳು ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿವೆ ಮತ್ತು ಎರಡು ಸಮುದಾಯಗಳ ನಡುವೆ ಬಿರುಕು ಮೂಡಿಸಿವೆ ಎಂದು ದೂರುದಾರರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
Total Views: 7







