Breaking News :

ರೈಲಿನಲ್ಲಿ ದನದ ಮಾಂಸ ಸಾಗಾಟ ಮಾಡುತ್ತಿದ್ದಿ ಎಂದು ಆರೋಪಿಸಿ ವೃದ್ಧನಿಗೆ ಥಳಿಸಿದ ಗುಂಪು

ಚಲಿಸುತ್ತಿದ್ದ ರೈಲಿನಲ್ಲಿ ದನದ ಮಾಂಸ ಸಾಗಿಸುತ್ತಿದ್ದಾರೆ ಎಂದು ಆರೋಪಿಸಿ ವೃದ್ಧನೊಬ್ಬನ ಮೇಲೆ ದುಷ್ಕರ್ಮಿಗಳ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ನಡೆದಿದೆ.

ವೃದ್ಧನ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೊ ವೈರಲ್ ಆಗಿದೆ. ಅದರಲ್ಲಿ ಹನ್ನೆರಡು ಮಂದಿ ಸುತ್ತುವರಿದು ಆ ವ್ಯಕ್ತಿಗೆ ಹಲ್ಲೆ ನಡೆಸುವುದು, ಅವಾಚ್ಯ ಶಬ್ದಗಳಿಂದ ನಿಂದಿಸುವುದು ಮತ್ತು ಬೆದರಿಕೆಗಳನ್ನು ಹಾಕುವುದನ್ನು ಕಾಣಬಹುದು.

ಘಟನೆಯ ಕುರಿತು ಸರ್ಕಾರಿ ರೈಲ್ವೆ ಪೊಲೀಸರು ತನಿಖೆ ಆರಂಭಿಸಿದ್ದು, ಇದರಲ್ಲಿ ಭಾಗಿಯಾಗಿರುವ ಕೆಲವು ವ್ಯಕ್ತಿಗಳನ್ನು ಗುರುತಿಸಲಾಗಿದೆ.

ದಾಳಿ ಮಾಡಿರುವ ಆರೋಪಿಗಳನ್ನು ಸಹ ಗುರುತಿಸಲಾಗಿದೆ, ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಯನ್ನು ಉಲ್ಲೇಖಿಸಿ ಹೇಳಿದ್ದಾರೆ. ಆದರೆ, ಇನ್ನೂ ಯಾವುದೇ ಪ್ರಕರಣ ದಾಖಲಾಗಿಲ್ಲ.

ಜಿಆರ್‌ಪಿ ಪ್ರಕಾರ, ಸಂತ್ರಸ್ತ ವೃದ್ಧ, ಜಲಗಾಂವ್ ಜಿಲ್ಲೆಯ ನಿವಾಸಿ ಹಾಜಿ ಅಶ್ರಫ್ ಮುನ್ಯಾರ್ ತನ್ನ ಮಗಳ ಮನೆಗೆ ಹೋಗಲು ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಇದು ಮೇಕೆ ಮಾಂಸವೇ ಹೊರತು ದನದ ಮಾಂಸವಲ್ಲ ಎಂದು ವೃದ್ಧ ಹೇಳುತ್ತಿರುವುದು ವಿಡಿಯೊದಲ್ಲಿ ಕೇಳಿಬರುತ್ತಿದೆ. ದಾಳಿಕೋರರು ಕೇಳಲು ಸಿದ್ಧರಿರಲಿಲ್ಲ, ಹಲ್ಲೆ ನಡೆಸುವುದನ್ನು ಮುಂದುವರಿಸಿದರು.

ಕಾಂಗ್ರೆಸ್ ಸಂಸದ ಇಮ್ರಾನ್ ಪ್ರತಾಪಘರ್ಹಿ ಅವರು ಮಹಾರಾಷ್ಟ್ರ ಸರ್ಕಾರ ಇಂತಹ ಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಆತ ಗೋಮಾಂಸ ಸಾಗಿಸುತ್ತಿದ್ದಾನೆಂದು ಭಾವಿಸಿ ಕೆಲವು ಯುವಕರು ಆತನನ್ನು ಥಳಿಸಿದ್ದಾರೆ. ಈ ರೀತಿ ವರ್ತನೆ ತೋರಿಸಬಾರದು, ಇದು ಮಹಾರಾಷ್ಟ್ರ ಅಲ್ಲ. ನಮ್ಮ ಸಂಸ್ಕೃತಿಯಲ್ಲ ಎಂದಿದ್ದಾರೆ.

Share this article

ಟಾಪ್ ನ್ಯೂಸ್

More News