Breaking News :

ಉಡುಪಿ: ಮಹಿಳೆಯ ಬರ್ಬರ ಕೊಲೆ, ಪತಿಯೇ ಕೃತ್ಯ ನಡೆಸಿರುವ ಶಂಕೆ

ಉಡುಪಿ;8 ತಿಂಗಳ ಹಿಂದೆ ವಿವಾಹವಾಗಿದ್ದ ಮಹಿಳೆಯೋರ್ವರು ದಾರುಣವಾಗಿ ಕೊಲೆಗೀಡಾದ ಘಟನೆ ಸಾಲಿಗ್ರಾಮದಲ್ಲಿ ಸಂಭವಿಸಿದೆ.

ಮೂಲತಃ ಕೊಪ್ಪಳದ ನಿವಾಸಿ ಜಯಶ್ರೀ ಹತ್ಯೆಗೀಡಾದವರು.
ಜಯಶ್ರೀಗೆ ಗುಂಡ್ಮಿ ಗ್ರಾಮದ ಕಿರಣ್ ಉಪಾಧ್ಯ ಅವರೊಂದಿಗೆ 8 ತಿಂಗಳ ಹಿಂದೆ ವಿವಾಹವಾಗಿತ್ತು.

ವಿವಾಹದ ನಂತರ ಇವರಿಬ್ಬರು ಕಾರ್ಕಡದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆದರೆ ಇಂದು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಜಯಶ್ರಿಗೆ ಕೌಟುಂಬಿಕ ಕಲಹದಿಂದ ಪತಿ ಕಿರಣ್ ಹತ್ಯೆ ನಡೆಸಿದ್ದಾನೆ ಎನ್ನಲಾಗಿದ್ದು, ಕೋಟ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

Share this article

ಟಾಪ್ ನ್ಯೂಸ್

More News